ಜಗಳೂರು :
ವಿಜಯನಗರ ಜಿಲ್ಲೆಯ ಜಗಳೂರು ತಾಲ್ಲೂಕಿನ ಉಚ್ಚಂಗಿದುರ್ಗದ ಉತ್ಸವಾಂಬಾ ದೇವಿಯ ಹಿರೇಹಬ್ಬದ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಾಯಿತು. ಬಳಿಕ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸತ್ಕಾರ ಸ್ವೀಕರಿಸಿ, ಮಾತನಾಡಲಾಯಿತು.
ಸುಮಾರು 2000 ವರ್ಷಗಳ ಇತಿಹಾಸವಿರುವ ಮುಜರಾಯಿ ಇಲಾಖೆಗೆ ಸೇರಿದ ‘ಎ’ ಗ್ರೇಡ್ ದೇವಸ್ಥಾನ ಇದಾಗಿದ್ದು, ಮುಂದಿನ ದಿನಗಳಲ್ಲಿ ಈ ದೇಗುಲವನ್ನು ಸಮಗ್ರ ಅಭಿವೃದ್ದಿ ಮಾಡಲಾಗುವುದು. ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ದೇವಸ್ಥಾನವನ್ನು ಅಭಿವೃದ್ಧಿ ಮಾಡುವ ಕನಸನ್ನು ನಾವು ನಮ್ಮ ರಾಜ್ಯದಲ್ಲಿ ನನಸು ಮಾಡಲು ಮುಂದಾಗಿದ್ದೇವೆ. ದೈವ ಸಂಕಲ್ಪ ಯೋಜನೆಯಡಿ ಈ ದೇಗುಲದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು. ಸದ್ಯದಲ್ಲೇ ವ್ಯವಸ್ಥಾಪನಾ ಮಂಡಳಿಯ ರಚನೆ ಮಾಡಲಾಗುವುದು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಜಿ.ಎಂ. ಸಿದ್ದೇಶ್ವರ,ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ಶ್ರೀಮತಿ ಗಾಯತ್ರಿ ಸಿದ್ದೇಶ್ವರ, ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ ಬೀಳಗಿ,ಸ್ಥಳೀಯ ಮುಖಂಡರು ಹಾಗೂ ಭಕ್ತಾಧಿಗಳು ಪಾಲ್ಗೊಂಡಿದ್ದರು.