ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನೋದಾದರೆ ಇನ್ಮುಂದೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಸಾಮಾಜಿಕ ಹೋರಾಟಗಾರ ಮತ್ತು ನಟ ಆ ದಿನಗಳು ಚೇತನ್ ಕುಮಾರ್ ಹೇಳಿದ್ದಾರೆ.
ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರೋ ಚೇತನ್, ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಿಣಾ ಸಮಿತಿ ಮುಸ್ಲಿ ಎಂಬ ಕಾರಣಕ್ಕೆ ಟಿಪ್ಪು ಅವರನ್ನು ಟಾರ್ಗೆಟ್ ಮಾಡುತ್ತಿದೆ. ಮುಸ್ಲಿಮರನ್ನು ಗುರಿಯಾಗಿಸಿ ನಮ್ಮ ಇತಿಹಾಸವನ್ನು ಹಿಂದುತ್ವಗೊಳಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಟಿಪ್ಪು ಇನ್ಮುಂದೆ ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಲಾಗುತ್ತಿದೆ. ಬ್ರಿಟಿಷರ ವಿರುದ್ಧ ಹೋರಾಡುತ್ತ ಯುದ್ಧ ಭೂಮಿಯಲ್ಲಿ ಮಡಿದ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅಂತಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಪೋಸ್ಟ್ ಹಾಕಿದ್ದಾರೆ.