ದಾವಣಗೆರೆ: ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದವರಿಗೆ ಬಿಜೆಪಿ ಟಿಕೆಟ್ ಕೊಟ್ಟು ದಲಿತ ಸಮುದಾಯ ಎದುರು ಹಾಕಿಕೊಳ್ಳಲು ಆಗುವುದಿಲ್ಲ. ವಾಗೀಶ್ ಸ್ವಾಮಿಗೆ ಟಿಕೆಟ್ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಬೇಡಜಂಗಮ ಎಸ್ಸಿ ಪ್ರಮಾಣ ಪತ್ರ ಪಡೆದವರಿಗೆ ಬಿಜೆಪಿ ಟಿಕೆಟ್ ಕೊಡಲು ಆಗುವುದಿಲ್ಲ. ಕೆಲವರು ಬೇಡ ಜಂಗಮ ಎಸ್ಸಿ ಎಂದು ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ. ಅಂಥವರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲ. ಅವರು ಬೇಡಜಂಗಮ ಮೀಸಲಾತಿ ಅಡಿ ಸ್ಪರ್ಧಿಸಬೇಕು ಎಂದರೆ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಲಿ. ಅವರಿಗೆ ಬಿಜೆಪಿ ಟಿಕೆಟ್ ಕೊಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ ಎಂದರು. ವಾಗೀಶ್ ಸ್ವಾಮಿ ಅವರು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.