ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ವಿದ್ಯುತ್ ಶಾಕ್ – ಯೂನಿಟ್‍ಗೆ 35 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಹಿಜಬ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್-ಜಟ್ಕಾ ಕಟ್, ಧ್ವನಿವರ್ಧಕ ವಿವಾದ ನಡೆಯುತ್ತಿರುವ ಮಧ್ಯೆ ಪೆಟ್ರೋಲ್, ಡೀಸೆಲ್ ಬೆಲೆ…

ರಾಹುಲ್​ ಗಾಂಧಿ ಹೆಸರಿಗೆ ತನ್ನೆಲ್ಲಾ ಆಸ್ತಿ ಬರೆದುಕೊಟ್ಟ 78ರ ವೃದ್ಧೆ..

ನವದೆಹಲಿ: ಉತ್ತರಾಖಂಡ್ ಡೆಹ್ರಾಡೂನ್‌ ಮೂಲದ 78 ವರ್ಷದ ವೃದ್ಧೆಯೊಬ್ಬರು ತನ್ನ ಆಸ್ತಿಯನ್ನು ಕಾಂಗ್ರೆಸ್​ ವರಿಷ್ಠ ರಾಹುಲ್​ ಗಾಂಧಿ ಹೆಸರಿಗೆ ವಿಲ್​ ಮಾಡಿದ್ದಾರೆ.…

ದಾವಣಗೆರೆ: ಏ.07ರಂದು ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟವ್ರ್ಯೂವ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ವತಿಯಿಂದ ಏ.07 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ…

ಟೈಗರ್ ನಾಗೇಶ್ವರ್ ರಾವ್’ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಸಾಥ್…ದಿ ಕಾಶ್ಮೀರಿ ಫೈಲ್ಸ್ ನಿರ್ಮಾಪಕರ ಮತ್ತೊಂದು ಸಾಹಸ..ಮಾಸ್ ಮಹಾರಾಜ ರವಿತೇಜ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿರ್ಮಾಪಕ ಅಭಿಷೇಕ್ ಅರ್ಗವಾಲ್ ಟೈಗರ್ ನಾಗೇಶ್ವರ್ ರಾವ್ ಎಂಬ ಪ್ಯಾನ್…

ನಾಸಿಕ್ ಬಳಿ ಹಳಿ ತಪ್ಪಿದ ಲೋಕಮಾನ್ಯ ತಿಲಕ್​ ಎಕ್ಸ್​​ಪ್ರೆಸ್​ ರೈಲು

ನಾಸಿಕ್​ (ಮಹಾರಾಷ್ಟ್ರ): ಎಕ್ಸ್​​ಪ್ರೆಸ್​ ರೈಲೊಂದು ಹಳಿ ತಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್​ ಬಳಿ ಭಾನುವಾರ(ಇಂದು) ಮಧ್ಯಾಹ್ನ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ…

ಇದು ನನ್ನ ರಾಜಕೀಯ ಜೀವನಕ್ಕೆ ಅನಿವಾರ್ಯ : ಬಿಜೆಪಿ ಸೇರ್ಪಡೆ ಖಚಿತ ಪಡಿಸಿದ ಹೊರಟ್ಟಿ

ಹುಬ್ಬಳ್ಳಿ; ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಈ ಹಿನ್ನೆಲೆ ತ್ರಿಮಿತ್ರ ಟಿವಿ ಜೊತೆ ಬಸವರಾಜ ಅವರು ಮುಕ್ತವಾಗಿ ಮಾತನಾಡಿದ್ದಾರೆ.…

ನವರಾತ್ರಿಯ ಮೊದಲನೇ ದಿನದಿಂದಲೇ ರಾಮನವಮಿ ಆಚರಣೆ ಆರಂಭ

ಶ್ರೀ ರಾಮ(Shri Ram) ಎಂದರೆ ಆದರ್ಶ ಪುರುಷ. ವಿಷ್ಣು(Lord Vishnu)ವಿನ ಏಳನೇ ಅವತಾರವಾಗಿ ರಘುವಂಶದಲ್ಲಿ ಜನಿಸಿದ ರಾಮನ ಹೆಸರಲ್ಲೇ ಅಗ್ನಿ ಬೀಜಾಕ್ಷರ…

‘ಮಸೀದಿಗಳ ಧ್ವನಿವರ್ಧಕ ತೆಗೆಸಿ, ಇಲ್ಲದಿದ್ದರೆ ಮಸೀದಿ ಗೇಟ್‌ ಬಳಿ ಹನುಮಾನ್ ಚಾಲೀಸಾ ಪಠಿಸುತ್ತೇವೆ’

ಮುಂಬೈ(ಏ.03): ರಂಜಾನ್ ತಿಂಗಳು ಆರಂಭವಾಗುತ್ತಿದ್ದಂತೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಗಟ್ಟಿ ಧ್ವನಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಈ…

ಪೆಟ್ರೋಲ್‌, ಡೀಸೆಲ್ 80 ಪೈಸೆ ಹೆಚ್ಚಳ; ದೇಶಾದ್ಯಂತ ಇಂದಿನ ತೈಲ ದರ ಹೀಗಿದೆ..

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿ ಹೋಗಿರುವ ದೇಶದ ಜನತೆಗೆ ಪ್ರತಿ ದಿನ ತೈಲ ಬೆಲೆ ಏರಿಕೆ ಬಿಸಿ…

ಗೊತ್ತಾಯ್ತಾ ವಿಕ್ರಂತ ರೋಣ ನ ಆಗಮನದ ದಿನಾಂಕ ಹಾಗಾದರೆ ಇಲ್ಲಿ ನೋಡಿ

ಕಿಚ್ಚ ಸುದೀಪ್ (Kichcha Sudeep)​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾದ ಹೊಸ ಟೀಸರ್​ ಬಿಡುಗಡೆ ಆಗಿದೆ. ಈ ಮೊದಲೇ ತಿಳಿಸಿದಂತೆ ಇಂದು (ಏ.2) ಬೆಳಗ್ಗೆ 9.55ಕ್ಕೆ ಟೀಸರ್​ ರಿಲೀಸ್​ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್​ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್​ ರೋಣ’ ಟೀಸರ್​ (Vikrant Rona Teaser) ರಿಲೀಸ್​ ಮಾಡಿದ್ದಾರೆ. ಈ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು.28ರಂದು ರಿಲೀಸ್​ ಆಗಲಿದೆ. ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಹೊಸ ಡೇಟ್​ ತಿಳಿಯಲು ಸುದೀಪ್​ ಫ್ಯಾನ್ಸ್​ ಕಾದು ಕುಳಿತಿದ್ದರು. ಅವರಿಗೆಲ್ಲ ಈ ಟೀಸರ್​ ಮೂಲಕ ಗುಡ್​ ನ್ಯೂಸ್​ ನೀಡಲಾಗಿದೆ. ಜು.28ರಂದು ‘ವಿಕ್ರಾಂತ್​ ರೋಣ’ (Vikrant Rona) ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್​ ಗೆಟಪ್​ನಲ್ಲಿ ಸುದೀಪ್​ ಕಾಣಿಸಿಕೊಂಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ 3ಡಿ ವರ್ಷನ್​ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್​ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್​ ಲಾಲ್​, ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ಇಂಗ್ಲಿಷ್​ನಲ್ಲಿ ವೀರೇಂದ್ರ ಸೆಹ್ವಾಗ್​ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಟೀಸರ್​ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಒಂದು ದೀರ್ಘವಾದ ಮತ್ತು ಸುಂದರ ಪಯಣದ ಬಳಿಕ ಈ ವಿಷಯ ತಿಳಿಸಲು ಖುಷಿ ಆಗುತ್ತಿದೆ. ವಿಕ್ರಾಂತ್​ ರೋಣ ಸಿನಿಮಾ ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ’ ಎಂದು ಬರೆದುಕೊಳ್ಳುವ ಮೂಲಕ ಕನ್ನಡ ಅವತರಣಿಕೆಯ ಟೀಸರ್ ಅನ್ನು ಕಿಚ್ಚ ಸುದೀಪ್​ ಅವರು ಬಿಡುಗಡೆ ಮಾಡಿದ್ದಾರೆ.

ಟಿಸರ್.