ಪ್ರವೀಣ್ ಕೊಲೆ ಪ್ರಕರಣ – ಬಿಜೆಪಿ ಯುವಮೋರ್ಚಾದಿಂದ ರಾಜೀನಾಮೆ ಪರ್ವ

News desk – ಬಿಜೆಪಿ ಕಾರ್ಯಕರ್ತ ಪ್ರವೀಣ್ ಕೊಲೆ ಹಾಗೂ  ಕಳೆದ ಕೆಲವು ವರ್ಷಗಳಿಂದ ಪದೇಪದೇ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಮತ್ತು ಹತ್ಯೆಗಳ ವಿರುದ್ಧ ತಮ್ಮದೇ  ಬಿಜೆಪಿ ಸರ್ಕಾರ ಯಾವುದೇ ದಿಟ್ಟ ಕ್ರಮ ಕೈಗೊಳ್ಳದಿರುವ ಬಗ್ಗೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ರಾಜ್ಯ ಯುವ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಕೊಡಲಾರಂಬಿಸಿದ್ದಾರೆ . ಸರ್ಕಾರ ಈ ಬಾರಿ ಸರಿಯಾದ ದೃತ್ಯ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ  ಬಿಜೆಪಿ ಪಕ್ಷಕ್ಕೆ ಹಿಂದುಗಳು ತಕ್ಕ ಪಾಠ ಕಲಿಸಲಿದ್ದಾರೆ ಎಂದು  ಹಲವು ಹಿಂದೂಪರ ಸಂಘಟನೆಗಳು ಎಚ್ಚರಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಗೆ ಪಟ್ಟು ಹಿಡಿದಿದ್ದಾರೆ . ಸ್ವಪಕ್ಷಿಯರಿಂದಲೆ ವಿರೋಧ ವ್ಯಕ್ತವಾಗುತ್ತಿರುವುದು ಬಿಜೆಪಿ ಪಾಳಯದಲ್ಲಿ  ತಲೆನೋವಾಗಿ ಪರಿಣಮಿಸಿದೆ.

Leave a Reply

Your email address will not be published. Required fields are marked *