ಬೆಳಗಾವಿಯಲ್ಲಿ ಯುವತಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ಗಲಾಟೆ: ಇಬ್ಬರಿಗೆ ಗಾಯ

ಯುವತಿ ವಿಚಾರಕ್ಕೆ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಗುಂಪು ಪರಸ್ಪರ ಬಡಿದಾಡಿಕೊಂಡ ಘಟನೆ ಕಾಲೇಜು ರಸ್ತೆಯಲ್ಲಿರುವ ಬಸ್ ನಿಲ್ದಾಣ ಬಳಿ ನಡೆದಿದೆ. ಕಾಲೇಜು ಬಿಡುತ್ತಿದ್ದಂತೆ ಬಸ್ ನಿಲ್ದಾಣ ಬಳಿ ಸೇರಿದ ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಗಲಾಟೆ ಶುರುವಾಗಿದೆ.

ಈ ವೇಳೆ ಹರಿತವಾದ ಕಟರ್‌ನಿಂದ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ನಿವಾಸಿ ಶ್ರೀಹರಿ ತವಗಮಠ ಎಂಬ ವಿದ್ಯಾರ್ಥಿಯ ಬೆನ್ನಿಗೆ ಇರಿದಿದ್ದು ಗಾಯಗೊಂಡಿದ್ದಾನೆ. ಘಟನೆಯಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಪರಶುರಾಮ ಗಾಡಿವಡ್ಡರ ಎಂಬಾತನಿಗೂ ಗಾಯವಾಗಿದ್ದು, ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Leave a Reply

Your email address will not be published. Required fields are marked *