ಪಕ್ಷದ ಕಾರ್ಯಕರ್ತರಿಗಿಂತ ಶಾಸಕ ಸಂಸದ ನಾಯಕರು ದೊಡ್ಡವರಲ್ಲ- ಅಮಿತ್ ಷಾ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಸೂದ್, ಪ್ರವೀಣ್, ಫಾಜಿಲ್ ಕೊಲೆ ಆರೋಪಿಗಳನ್ನು ಶೀಘ್ರವೇ ಬಂಧಿಸಿ ತನಿಖೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಗೆ (Basavaraj Bommai) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಖಡಕ್ ಸೂಚನೆ ನೀಡಿದ್ದಾರೆ. ಯಾವುದೇ ಜಾತಿ, ಮತ ನೋಡದೇ ತನಿಖೆ ಮಾಡಿಸಿ ಎಂದಿರುವ ಅಮಿತ್ ಶಾ ಕೇಸ್‌ಗಳನ್ನ ತ್ವರಿತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಗೊಳಪಡಿಸಿ ಎಂದಿದ್ದಾರೆ. ಈ ಮಧ್ಯೆ ಕೇವಲ ಸಚಿವರು ಮತ್ತು ಶಾಸಕರನ್ನು ಮಾತ್ರ ಗಮನಿಸುವುದಲ್ಲ. ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನೂ (Karnataka BJP) ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಿಎಂ ಬೊಮ್ಮಾಯಿ‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ರೂಪದಲ್ಲಿ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *