ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ (Mulayam Singh Yadav) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ (ಅಕ್ಟೋಬರ್ 2) ಅವರ ಆರೋಗ್ಯ ಹದಗೆಟ್ಟ ನಂತರ ವೈದ್ಯರು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ರಾತ್ರಿಯ ವೇಳೆಯಲ್ಲಿಯೇ ಅವರನ್ನು ಜೀವರಕ್ಷಕ ವ್ಯವಸ್ಥೆಯಲ್ಲಿ ಅಂದರೆ ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ಳೆದ 8 ದಿನಗಳಿಂದ ಮುಲಾಯಂ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿರಲಿಲ್ಲ. ಮೇದಾಂತ ಆಸ್ಪತ್ರೆ ಗುರುವಾರ ಹೊರಡಿಸಿದ ಬುಲೆಟಿನ್ನಲ್ಲಿ, ಮುಲಾಯಂ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು.