ಧಾರವಾಡ: ರಾಜ್ಯದಲ್ಲಿ 160 ಸಾಮಾನ್ಯ ವಿಧಾನಸಭಾ ಕ್ಷೇತ್ರಗಳಿವೆ. ಸಿದ್ದರಾಮಯ್ಯನವರಿಗೆ (Siddaramaiah) ಒಂದೂ ಕ್ಷೇತ್ರ ಸಿಗದಂತಾಗಿದೆ. ಇದರಿಂದ ಅವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಲೇವಡಿ ಮಾಡಿದರು.
ಧಾರವಾಡದಲ್ಲಿ (Dharawada) ಮಾತನಾಡಿದ ಅವರು, ಸಿದ್ದರಾಮಯ್ಯನವರು ಕ್ಷೇತ್ರಕ್ಕಾಗಿ ಓಡಾಡುತ್ತಿದ್ದಾರೆ. ಒಮ್ಮೆ ಕೋಲಾರಕ್ಕೆ ಹೋಗುತ್ತಾರೆ, ಒಮ್ಮೆ ಚಾಮರಾಜನಗರಕ್ಕೆ ಹೋಗುತ್ತಾರೆ. ಸಿದ್ದರಾಮಯ್ಯ ಒಬ್ಬ ಸ್ವಯಂ ಘೋಷಿತ ಸಿಎಂ ಎಂದರು.