ಬೆಂಗಳೂರು : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಜೈಲಾ.. ಬೇಲಾ..? ಎನ್ನುವ ಬೇಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ…
ಹೈಕೋರ್ಟ್ ಇಂದಿಗೆ ಬೇಲ್ ಆದೇಶ ಕಾಯ್ದಿರಿಸಿದೆ. ಮುರುಘಾ ಶ್ರೀ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು, ಅಕ್ಟೋಬರ್ 31ರಂದು ಬೇಲ್ ಅರ್ಜಿ ವಾದ-ಪ್ರತಿವಾದ ನಡೆದಿತ್ತು. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಮೈಸೂರಿನ ನಜರ್ಬಾದ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಚಿತ್ರದುರ್ಗಕ್ಕೆ ಪೋಕ್ಸೋ ಕೇಸ್ ವರ್ಗಾವಣೆ ಆಗಿತ್ತು, ಸದ್ಯ ಮುರುಘಾ ಶ್ರೀ ಚಿತ್ರದುರ್ಗ ಜೈಲಿನಲ್ಲಿದ್ದಾರೆ. ಒಡನಾಡಿ ಸಂಸ್ಥೆ ಪರ ವಕೀಲ ಡಿಸಿ ಶ್ರೀನಿವಾಸ್ ವಾದ ಮಂಡಿಸಿದ್ರು, ಶ್ರೀಗಳ ಪರವಾಗಿ ಹಿರಿಯ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದ್ದರು. ಇಂದು ಬೇಲ್ ಭವಿಷ್ಯ ನಿರ್ಧಾರವಾಗಲಿದೆ…
ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕದ ತಟ್ಟಿದ್ದರು.ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಅದಾದ ನಂತರ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದ್ದು, ಬಳಿಕ ಫೋಕ್ಸೋ ಪ್ರಕರಣದಡಿಯಲ್ಲಿ ಮುರುಘಾ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಪೊಲೀಸರು ಬಂಧಿಸಿದ್ದರು.