ಉಡುಪಿಯಲ್ಲಿ ಕೊರಗಜ್ಜನ ಪವಾಡ – 3 ದಿನದಲ್ಲಿ ದೈವ ನುಡಿದಂತೆ ಸಿಕ್ಕಿಬಿದ್ದ ಕಳ್ಳ

ಉಡುಪಿ: ಕೊರಗಜ್ಜನ (Koragajja) ಪವಾಡ ಮತ್ತೊಮ್ಮೆ ಕರಾವಳಿಯಲ್ಲಿ ನಡೆದಿದೆ. ಎರಡನೇ ಬಾರಿ ಹುಂಡಿ ಕದಿಯುವಾಗ ಕಳ್ಳ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಹೆಬ್ರಿ ತಾಲೂಕು ಮುದ್ರಾಡಿಯ (Mudradi) ಆದಿಶಕ್ತಿ ದೇಗುಲದ ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದಲ್ಲಿ ಮೇ 25 ರಂದು ಕಳ್ಳತನ ನಡೆದಿತ್ತು. ಬೇಸರದಿಂದ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು

ಹುಂಡಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗುತ್ತಿರುವುದು

ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು ಪತ್ತೆ ಮಾಡಿಕೊಡುವುದಾಗಿ ದೈವ ಅಭಯ ನೀಡಿತ್ತು.

ಜೂನ್‌ 3 ರ ಮಧ್ಯರಾತ್ರಿ 12:30 ರ ವೇಳೆಗೆ ಕಳ್ಳ ಎರಡನೇ ಬಾರಿ ಹುಂಡಿ ಕದಿಯಲು ಬಂದಿದ್ದಾನೆ. ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಳ್ಳತನ ಎಸಗಿ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದವನನ್ನು ಆಗುಂಬೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಸಲ್ಮಾನ್ ಬಂಧಿತ ಕಳ್ಳನಾಗಿದ್ದಾನೆ. ಈಗ ದೈವದ ಅಭಯ ನಿಜವಾಯ್ತು ಎಂದ ಆಡಳಿತ ವರ್ಗ, ಗ್ರಾಮಸ್ಥರು ಸಂತಸ ಪಟ್ಟಿದ್ದಾರೆ.

Leave a Reply

Your email address will not be published. Required fields are marked *