ಮಂಗಳೂರು: ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಅವರನ್ನು ಮುಖಾಮುಖಿ ಭೇಟಿಯಾದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ…
Author: Prakash Prabhu
ವಿಪ್ರೋ ಕಂಪನಿಯ ಸಂದರ್ಶದಲ್ಲಿ ದಾವಣಗೆರೆಯ GMIT ಕಾಲೇಜಿನ 97 ವಿದ್ಯಾರ್ಥಿಗಳು ಆಯ್ಕೆ
ದಾವಣಗೆರೆ: ಪ್ರತಿಷ್ಠಿತ ವಿಪ್ರೋ ಕಂಪನಿ ಇತ್ತೀಚಿಗೆ ನಡೆಸಿದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿಯ(GMIT) 97 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ…
ಹೊಸ ಹೆಜ್ಜೆ ಇಟ್ಟ ವಸಿಷ್ಠ ಸಿಂಹ….ಸಿಂಹಾ ಹೆಸರಿನಲ್ಲಿ ಆಡಿಯೋ ಕಂಪನಿ ಅನಾವರಣ
ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ…
ಪಿ.ಅರ್.ಕೆ ಪ್ರೊಡಕ್ಷನ್ ನ ಮುಂದಿನ ಚಿತ್ರ ಆಚರ್ & ಕೋ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸಿನ ಕೂಸಾದ ಅಂತಹ PRK ಪ್ರೊಡಕ್ಷನ್ ನಿಂದ ಅವರ ಅಗಲಿಕೆ ನಂತರ ಮೊದಲ ಚಿತ್ರ…
ಉಡುಪಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿಕಾಳಗ ವಿಡಿಯೋ ನೋಡಿ
ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬೀದಿ ಕಾಳಗ.ವಿಡಿಯೋ ವೈರಲ್
ಉಡುಪಿ ಸಿಟಿ ಬಸ್ ನಿಲ್ದಾಣ ದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ನಿರ್ವಾಹಕರ ಮಧ್ಯೆ ಬೀದಿ ಕಾಳಗ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಸುಗಳ ಕಂಡೆಕ್ಟರ್ ಗಳು ಟೈಮಿಂಗ್ಸ್ ವಿಚಾರದಲ್ಲಿ ಜಗಳ ಶುರು ಮಾಡಿದ್ದು,ಬಳಿಕ ಪ್ರಯಾಣಿಕರ ಎದುರೇ ಬೀದಿ ಜಗಳ ಮಾಡಿದ್ದು,ಸಾರ್ವಜನಿಕರ ಅಶಾಂತಿಗೆ ಕಾರಣವಾಗಿದೆ. ಪ್ರಯಾಣಿಕ
ರೊಬ್ಬರು ತೆಗೆದ ವಿಡಿಯೋ ಇದೀಗ ವೈರಲ್ ಅಗಿದೆ.
ಸಾರ್ವಜನಿಕ ಶಾಂತಿ ಭಂಗ ಮಾಡಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕ್ರಮಕೈಗೊಳ್ಖುವಂತೆ ಅಗ್ರಹ ವ್ಯಕ್ತವಾಗಿದೆ.
ಗೊತ್ತಾಯ್ತಾ ವಿಕ್ರಂತ ರೋಣ ನ ಆಗಮನದ ದಿನಾಂಕ ಹಾಗಾದರೆ ಇಲ್ಲಿ ನೋಡಿ
ಕಿಚ್ಚ ಸುದೀಪ್ (Kichcha Sudeep) ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾದ ಹೊಸ ಟೀಸರ್ ಬಿಡುಗಡೆ ಆಗಿದೆ. ಈ ಮೊದಲೇ ತಿಳಿಸಿದಂತೆ ಇಂದು (ಏ.2) ಬೆಳಗ್ಗೆ 9.55ಕ್ಕೆ ಟೀಸರ್ ರಿಲೀಸ್ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್ ನಟರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್ ರೋಣ’ ಟೀಸರ್ (Vikrant Rona Teaser) ರಿಲೀಸ್ ಮಾಡಿದ್ದಾರೆ. ಈ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು.28ರಂದು ರಿಲೀಸ್ ಆಗಲಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್ ಕಾರಣದಿಂದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿತ್ತು. ಹೊಸ ಡೇಟ್ ತಿಳಿಯಲು ಸುದೀಪ್ ಫ್ಯಾನ್ಸ್ ಕಾದು ಕುಳಿತಿದ್ದರು. ಅವರಿಗೆಲ್ಲ ಈ ಟೀಸರ್ ಮೂಲಕ ಗುಡ್ ನ್ಯೂಸ್ ನೀಡಲಾಗಿದೆ. ಜು.28ರಂದು ‘ವಿಕ್ರಾಂತ್ ರೋಣ’ (Vikrant Rona) ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್ ಗೆಟಪ್ನಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾ 3ಡಿ ವರ್ಷನ್ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್ನಲ್ಲಿ ವೀರೇಂದ್ರ ಸೆಹ್ವಾಗ್ ಅವರು ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್ ಅವರು ಧನ್ಯವಾದ ಅರ್ಪಿಸಿದ್ದಾರೆ.
‘ಒಂದು ದೀರ್ಘವಾದ ಮತ್ತು ಸುಂದರ ಪಯಣದ ಬಳಿಕ ಈ ವಿಷಯ ತಿಳಿಸಲು ಖುಷಿ ಆಗುತ್ತಿದೆ. ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ’ ಎಂದು ಬರೆದುಕೊಳ್ಳುವ ಮೂಲಕ ಕನ್ನಡ ಅವತರಣಿಕೆಯ ಟೀಸರ್ ಅನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದಾರೆ.
ಟಿಸರ್.
ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜ…ಯುಗಾದಿಗೆ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಮುಹೂರ್ತ!
ಈಗ ಏನಿದ್ರೂ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ-ಹವಾಮಾನ..ಟಾಲಿವುಡ್ ನಲ್ಲೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ತೆಲುಗಿನ ಮಾಸ್ ಮಹಾರಾಜ…
ಹೊಸಬರೊಂದಿಗೆ ಕೈಜೋಡಿಸಿ “ರಾಘು” ಆದ ವಿಜಯ ರಾಘವೇಂದ್ರ
ಹೊಸಬಗೆಯ, ಹೊಸತನ ಸಿನಿಮಾಗಳನ್ನು ಮಾಡುವುದರಲ್ಲಿ ಹೊಸಬರಿಗೆ ಅವಕಾಶ ಕೊಡುವುದರಲ್ಲಿ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಸದಾ ಮುಂದು.. ಸೀತಾರಾಮ್ ಬಿನೋಯ್ ಕೇಸ್…
ಯಡಿಯೂರಪ್ಪ ಎಂದಿಗೂ ನಂಬಿದವನ್ನ ಕೈಬಿಟ್ಟಿಲ್ಲ: ಶಾಸಕ ಎನ್.ಮಹೇಶ್
ಚಾಮರಾಜನಗರ: ತಾಯಿ ಹೃದಯ ಇರುವ ವ್ಯಕ್ತಿ ಬಿಎಸ್ವೈ. ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈ ಬಿಟ್ಟಿಲ್ಲ ಎಂದು ಬಿಜೆಪಿ ಶಾಸಕ ಎನ್.ಮಹೇಶ್ ಹೊಗಳಿಸಿದರು.…
ಪಕ್ಷದ ಚಿಹ್ನೆ ಇಲ್ಲದೆ ಸ್ವಂತ ಬಲದ ಮೇಲೆ ಗೆಲ್ಲುವರಾರು ಬಿಜೆಪಿ ಹೈಕಮಾಂಡ್ ಸರ್ವೆ
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್ನ ಮುಂದಿನ ಟಾರ್ಗೆಟ್ ಗುಜರಾತ್ ಮತ್ತು ಕರ್ನಾಟಕ. ಈ ವರ್ಷದ…