BLOG
ಇದು ನನ್ನ ರಾಜಕೀಯ ಜೀವನಕ್ಕೆ ಅನಿವಾರ್ಯ : ಬಿಜೆಪಿ ಸೇರ್ಪಡೆ ಖಚಿತ ಪಡಿಸಿದ ಹೊರಟ್ಟಿ
ಹುಬ್ಬಳ್ಳಿ; ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಈ ಹಿನ್ನೆಲೆ ತ್ರಿಮಿತ್ರ ಟಿವಿ ಜೊತೆ ಬಸವರಾಜ ಅವರು ಮುಕ್ತವಾಗಿ ಮಾತನಾಡಿದ್ದಾರೆ.…
ಗೊತ್ತಾಯ್ತಾ ವಿಕ್ರಂತ ರೋಣ ನ ಆಗಮನದ ದಿನಾಂಕ ಹಾಗಾದರೆ ಇಲ್ಲಿ ನೋಡಿ
ಕಿಚ್ಚ ಸುದೀಪ್ (Kichcha Sudeep) ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾದ ಹೊಸ ಟೀಸರ್ ಬಿಡುಗಡೆ ಆಗಿದೆ. ಈ ಮೊದಲೇ ತಿಳಿಸಿದಂತೆ ಇಂದು (ಏ.2) ಬೆಳಗ್ಗೆ 9.55ಕ್ಕೆ ಟೀಸರ್ ರಿಲೀಸ್ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್ ನಟರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್ ರೋಣ’ ಟೀಸರ್ (Vikrant Rona Teaser) ರಿಲೀಸ್ ಮಾಡಿದ್ದಾರೆ. ಈ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು.28ರಂದು ರಿಲೀಸ್ ಆಗಲಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್ ಕಾರಣದಿಂದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿತ್ತು. ಹೊಸ ಡೇಟ್ ತಿಳಿಯಲು ಸುದೀಪ್ ಫ್ಯಾನ್ಸ್ ಕಾದು ಕುಳಿತಿದ್ದರು. ಅವರಿಗೆಲ್ಲ ಈ ಟೀಸರ್ ಮೂಲಕ ಗುಡ್ ನ್ಯೂಸ್ ನೀಡಲಾಗಿದೆ. ಜು.28ರಂದು ‘ವಿಕ್ರಾಂತ್ ರೋಣ’ (Vikrant Rona) ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್ ಗೆಟಪ್ನಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾ 3ಡಿ ವರ್ಷನ್ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್ನಲ್ಲಿ ವೀರೇಂದ್ರ ಸೆಹ್ವಾಗ್ ಅವರು ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್ ಅವರು ಧನ್ಯವಾದ ಅರ್ಪಿಸಿದ್ದಾರೆ.
‘ಒಂದು ದೀರ್ಘವಾದ ಮತ್ತು ಸುಂದರ ಪಯಣದ ಬಳಿಕ ಈ ವಿಷಯ ತಿಳಿಸಲು ಖುಷಿ ಆಗುತ್ತಿದೆ. ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ’ ಎಂದು ಬರೆದುಕೊಳ್ಳುವ ಮೂಲಕ ಕನ್ನಡ ಅವತರಣಿಕೆಯ ಟೀಸರ್ ಅನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದಾರೆ.
ಟಿಸರ್.
ದಾವಣಗೆರೆ: ರೈತರಿಂದಲೇ ಬೆಳೆ ಸಮೀಕ್ಷೆ ; ಬೆಳೆ ಸಾಲ ಪಡೆಯಲು ಸಮೀಕ್ಷೆ ಅತ್ಯಗತ್ಯ
ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ…
ಹೊಸ ಅಳಿಯನನ್ನು ಅದ್ಧೂರಿಯಾಗಿ ಸ್ವಾಗತಿಸಿದ RCB #RCB
IPL 2022 RCB: ಆರ್ಸಿಬಿ ಆಟಗಾರ ಮ್ಯಾಕ್ಸ್ವೆಲ್ ಸದ್ಯ ದಾಂಪತ್ಯ ಜೀವನದ ಸಂತಸದಲ್ಲಿದ್ದಾರೆ. ಈ ನಡುವೆ ಅವರು ಭಾರತಕ್ಕೆ ಆಗಮಿಸಿದ್ದು, ಆರ್ಸಿಬಿ…
ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜ…ಯುಗಾದಿಗೆ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಮುಹೂರ್ತ!
ಈಗ ಏನಿದ್ರೂ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ-ಹವಾಮಾನ..ಟಾಲಿವುಡ್ ನಲ್ಲೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ತೆಲುಗಿನ ಮಾಸ್ ಮಹಾರಾಜ…
ಹೊಸಬರೊಂದಿಗೆ ಕೈಜೋಡಿಸಿ “ರಾಘು” ಆದ ವಿಜಯ ರಾಘವೇಂದ್ರ
ಹೊಸಬಗೆಯ, ಹೊಸತನ ಸಿನಿಮಾಗಳನ್ನು ಮಾಡುವುದರಲ್ಲಿ ಹೊಸಬರಿಗೆ ಅವಕಾಶ ಕೊಡುವುದರಲ್ಲಿ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಸದಾ ಮುಂದು.. ಸೀತಾರಾಮ್ ಬಿನೋಯ್ ಕೇಸ್…